News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

109

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.

2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.

3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.

4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.

5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.

6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.

7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.

8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.

9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.

10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.

11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.

12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.

13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.

14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.

15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.

16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.

17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.

18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.

19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.

20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.

21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.

22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.

23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.

24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.

25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.

26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…