News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

109

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.

2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.

3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.

4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.

5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.

6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.

7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.

8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.

9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.

10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.

11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.

12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.

13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.

14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.

15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.

16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.

17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.

18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.

19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.

20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.

21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.

22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.

23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.

24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.

25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.

26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.

  • ಸುದ್ದಿ

    ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..  ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ವಿಚಿತ್ರ ಆದರೂ ಸತ್ಯ

    ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

    ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…