News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

81

ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು. 
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್​ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್​ಲೋಡ್​ ಮಾಡಿದ್ದು ವೈರಲ್​ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್​ ಮಾಡ್ಕೊಂಡ್​ ಬಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ಆರೋಗ್ಯ, ತಂತ್ರಜ್ಞಾನ

    ಜಗತ್ತಿನಲ್ಲೇ ಮೊದಲ ಬಾರಿ ‘ಡಿಜಿಟಲ್ ಮಾತ್ರೆ’ ನೀಡಲು ಮುಂದಾದ ದೇಶ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!

  • ಉಪಯುಕ್ತ ಮಾಹಿತಿ

    ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

    ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…