ಸುದ್ದಿ

ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

53

ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!

ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್‌ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್‌ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.

ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್‌ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಆಂಡ್ರಾಯ್ಡ್ ಓಎಸ್‌ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್‌ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.

ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಕರ್ನಾಟಕ

    ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

    ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.

  • ಉಪಯುಕ್ತ ಮಾಹಿತಿ

    ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

    ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…