ಸುದ್ದಿ

ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

52

ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್‌ ಟು ಫೇಸ್‌ ವಿಡಿಯೊ ಕಾಲಿಂಗ್‌ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್‌ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್‌ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್‌ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್‌ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್‌ ನೂತನ ಫೀಚರ್ಸ್‌ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್‌ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್‌ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್‌ ಮೋಡ್‌ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್‌ ಡಾಟಾ ಉಳಿಸಿಬಹುದು. ಸೆಟ್ಟಿಂಗ್‌ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್‌ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್‌ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್‌ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್‌ ಕಾಲಿಂಗ್ ಫೀಚರ್‌ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್‌ ಕನೆಕ್ಟ್‌ ಮಾಡಬಹುದಾಗಿದೆ. ಗ್ರೂಪ್‌ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್‌ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್‌ ಎರಡು ಮಹತ್ತರ ಫೀಚರ್ಸ್‌ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್‌ ಮತ್ತು ಮೆಸೆಜ್‌ಗೆ ಸುರಕ್ಷತೆ ಒಸಗಿಸಲು ಎಂಡ್‌ ಟು ಎಂಡ್‌ ಎನ್‌ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್‌ ಕಾಲಿಂಗ್‌ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್‌ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್‌ ಡಾಟಾ ಮತ್ತು ವೈಫೈ ನೆಟವರ್ಕ್‌ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್‌ ಆಯ್ಕೆ ದೊರೆಯಲಿದೆ.
ಫೀಚರ್ಸ್‌ ಸೇರ್ಪಡೆ ಗೂಗಲ್‌ನ ಎರಡು ಹೊಸ ಫೀಚರ್ಸ್‌ಗಳು ಭಾರತದ ಅಂಡ್ರಾಯ್ಡ್‌ ಓಎಸ್‌ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್‌ ಮಾದರಿಯ ಓಎಸ್‌ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್‌ಡೇಟ್‌ ವರ್ಷನ್‌ನಲ್ಲಿ ಈ ಫೀಚರ್ಸ್‌ಗಳು ಸೇರಿಕೊಳ್ಳಲಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.