News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
govt

ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

68

ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯೂನಿಟ್ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್‌ ವಿದ್ಯುತ್‌ ಬಳಕೆ ಮಾಡುತ್ತಾರೆ. 2 ಲಕ್ಷಜ ನರು 200 ಯೂನಿಟ್‌ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.

ಸೇವಾ ಸಿಂಧು ಪೋರ್ಟ್‌ಲ್‌ ನಲ್ಲಿ ಜೂನ್‌ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್‌ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್‌ ಕಟ್ಟಬೇಕಿದೆ. ಆದರೆ ಉಚಿತ ಯೋಜನೆಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಅರ್ಜಿಸಲ್ಲಿಕೆಹೇಗೆ?

ಸೇವಾ ಸಿಂಧು ಪೋರ್ಟಲ್‌ ನಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್‌ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರುಒನ್‌, ಕರ್ನಾಟಕಒನ್‌, ಗ್ರಾಮಒನ್‌ ಸೆಂಟರ್‌ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್‌ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್‌ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನುE-Governance ಇಲಾಖೆ ಮಾಡಿಕೊಂಡಿರುತ್ತದೆ.

ಯೋಜನೆಯಡಿ ಬಾಡಿಗೆದಾರರು ಸೌಲಭ್ಯ ಪಡೆಯುವುದುಹೇಗೆ?

 

ವಿದ್ಯುತ್ ಬಿಲ್’ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ,  ಬಾಡಿಗೆ/ಭೋಗ್ಯದ ಕರಾರು ಪತ್ರಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಜೊತೆಗೆ ಆಧಾರ್ ಅನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?

ಜೂನ್‌ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.

  1. ಹೊಸ ಮನೆ ನಿರ್ಮಾಣ ಮಾಡಿದವರಿಗೆ ಈ ಯೋಜನೆ ಅನ್ವಯ ಆಗುತ್ತಾ?
  2. ಒಂದು ಮನೆಯಿಂದ ಮತ್ತೊಂದು ಮನೆಗೆ ಸ್ಥಳಾಂತರವಾದಾಗ ಈ ಯೋಜನೆ ಯಾವ ರೀತಿ ಅನ್ವಯವಾಗುತ್ತದೆ?

ಎಂಬ ಎರಡೂ ಅಂಶಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗು ಸಚಿವ ಸಂಪುಟದ ಗಮನಕ್ಕೆ ತಂದು ತುರ್ತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಇಂಧನ ಸಚಿವರು ಹೇಳಿದರು.

 

ಈ ಯೋಜನೆಗೆ ಸಂಬಂಧಿಸಿದಂತಹ ಮೇಲಿಂದ ಮೇಲೆ ಕೇಳಲಾಗುವ ಪ್ರಶ್ನೆಗಳು ಮತ್ತು ಸಂಶಯಗಳನ್ನು ನಿವಾರಿಸುವ ದೃಷ್ಠಿಯಿಂದ FAQ’s ತಯಾರಿಸಲಾಗಿದ್ದು,ಅದನ್ನು ಈ ಟಿಪ್ಪಣಿಯೊಂದಿಗೆ ಲಗತ್ತಿಸಿದೆ. ಈ ಮೂಲಕ ಗೃಹಬಳಕೆಯ ಗ್ರಾಹಕರಲ್ಲಿ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ.

ಆದಾಗ್ಯೂ ಈ ಯೋಜನೆಯ ಜಾರಿಯ ಸಂದರ್ಭದಲ್ಲಿ ಆಗ್ಗಾಗ್ಗೆ ಉದ್ಬವಿಸಬಹುದಾದ ಸಮಸ್ಯೆಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸ್ಪಂದಿಸಿ, ಅದಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಒಟ್ಟಾರೆ ಕರ್ನಾಟಕ ಸರ್ಕಾರದ ಈ ಮಹತ್ವದ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಜಾರಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ,  ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್.     ಜೆರವರು ಉಪಸ್ಥಿತರಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಆರೋಗ್ಯ

    ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

    ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…

  • ವಿಸ್ಮಯ ಜಗತ್ತು

    ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

    ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…