govt

ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

312

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ.

https://drive.google.com/file/d/1-14JW0nJ2hfXT-TAHsIykVdha9D9_eZC/view

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.

ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಯಾವೆಲ್ಲ ದಾಖಲೆಗಳು ಬೇಕು ?

* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.

* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್‌ / ಎಪಿಎಲ್‌/ ಅತ್ಯೋದಯ ಕಾರ್ಡ್‌ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

ಅರ್ಜಿ ಸಲ್ಲಿಕೆ ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.