govt

ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

316

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ.

https://drive.google.com/file/d/1-14JW0nJ2hfXT-TAHsIykVdha9D9_eZC/view

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.

ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಯಾವೆಲ್ಲ ದಾಖಲೆಗಳು ಬೇಕು ?

* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.

* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್‌ / ಎಪಿಎಲ್‌/ ಅತ್ಯೋದಯ ಕಾರ್ಡ್‌ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

ಅರ್ಜಿ ಸಲ್ಲಿಕೆ ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…