News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
govt

ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

335

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ.

https://drive.google.com/file/d/1-14JW0nJ2hfXT-TAHsIykVdha9D9_eZC/view

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.

ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಯಾವೆಲ್ಲ ದಾಖಲೆಗಳು ಬೇಕು ?

* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.

* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್‌ / ಎಪಿಎಲ್‌/ ಅತ್ಯೋದಯ ಕಾರ್ಡ್‌ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

ಅರ್ಜಿ ಸಲ್ಲಿಕೆ ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಗಂಟಲು ನೋವಿಗೆ ಮನೆಯಲ್ಲೇ ಔಷಧಿ ಸುಲಭವಾಗಿ ತಯಾರಿಸ ಬಹುದು ಈ ಲೇಖನ ಓದಿ ತಿಳಿಯಿರಿ….

    ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.