govt

ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

318

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ.

https://drive.google.com/file/d/1-14JW0nJ2hfXT-TAHsIykVdha9D9_eZC/view

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.

ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಯಾವೆಲ್ಲ ದಾಖಲೆಗಳು ಬೇಕು ?

* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.

* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್‌ / ಎಪಿಎಲ್‌/ ಅತ್ಯೋದಯ ಕಾರ್ಡ್‌ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

ಅರ್ಜಿ ಸಲ್ಲಿಕೆ ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…