ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.
ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ ಮಾತನಾಡಿದ ಗೂಳಿಹಟ್ಟಿ ಶೇಖರ್, ತಮ್ಮ ಕ್ಷೇತ್ರದಲ್ಲಿ ಆದ ಘಟನೆಯನ್ನು ವಿವರಿಸಿದರು.
ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಪ್ರತಿದಿನ ಸುಮಾರು 200 ಲೋಡ್ ಮರಳು ದೂರದ ಊರಿಗೆ ಅಕ್ರಮ ಸಾಗಾಣೆಯಾಗುತ್ತಿದೆ. ಒಂದು ಟ್ರಾಕ್ಟರ್ ಲೋಡ್ಗೆ 25 ಸಾವಿರದಂತೆ ಪೊಲೀಸರು ವಸೂಲಿ ಮಾಡುತ್ತಿದ್ದಾರೆ. ಅನೇಕ ಲಾರಿ ಮತ್ತು ಟ್ರಾಕ್ಟರ್ ಗಳನ್ನು ನಾನೇ ಖುದ್ದಾಗಿ ಹಿಡಿದಿದ್ದೇನೆ ಆದರೂ ಈ ದಂಧೆ ಮುಂದುವರೆಯುತ್ತಿದೆ ಎಂದರು.
ಬಡವರಿಗೆ ಮರಳೇ ಸಿಕ್ಕುತ್ತಿಲ್ಲ. ಸರ್ಕಾರದ ಕೆಲಸಕ್ಕೂ ಮರಳು ಇಲ್ಲ, ದೇವಸ್ಥಾನ ಕಟ್ಟಲು ಮರಳು ಸಿಗುತ್ತಿಲ್ಲ. ಸ್ಥಳೀಯರು ಇದರಿಂದ ಕೆಲಸ ಕಳೆದುಕೊಂಡು ಗುಳೇ ಹೋಗುತ್ತಿದ್ದಾರೆ. ಹೋಗಲಿ ಸಣ್ಣ ಹಳ್ಳ ಅಥವಾ ಮನೆ ಬಾಗಿಲಿನಿಂದ ಹರಿದ ನೀರಿನಿಂದ ಉಂಟಾದ ಮರಳನ್ನು ಕೂಡ ಬಡವರು ತೆಗೆದುಕೊಳ್ಳಲು ಈ ಅಧಿಕಾರಿಗಳು ಬಿಡುತ್ತಿಲ್ಲ.
ಸುಳ್ಳು ಕೇಸುಗಳನ್ನು ಬಡವರ ಮೇಲೆ ಅನ್ಯಾಯವಾಗಿ ಹಾಕಲಾಗುತ್ತಿದೆ. ಆದರೆ ಉಳ್ಳವರು ಮಾತ್ರ ತಮಗೆ ಬೇಕಾದಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದು ತಮಗೆ ನೋವುಂಟು ಮಾಡಿದೆ ಎಂದು ಗೂಳಿಹಟ್ಟಿ ಶೇಖರ್ ಈಶ್ವರಪ್ಪನವರ ಹತ್ತಿರ ಹೇಳಿಕೊಂಡರು.
ಇದರಿಂದ ಬೇಸತ್ತ ತಾವು ತಮ್ಮ ಬೆಂಬಲಿಗರಿಗಾದ ಅನ್ಯಾಯ ಖಂಡಿಸಿ ಬಡವರಿಗೆ ಮರಳು ಸಿಗದಿರುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದೆ ಅಷ್ಟೆ. ಮರಳನ್ನು ಕೂಡ ನೀಡದ ಈ ಸರ್ಕಾರಕ್ಕೆ ಏನು ಹೇಳಬೇಕೋ ತಮಗೆ ಗೊತ್ತಿಲ್ಲ. ಇದುವರೆಗೂ ಸುಮಾರು 500ಕ್ಕೂ ಹೆಚ್ಚು ಬಡವರನ್ನು ಜೈಲಿಗೆ ಕಳಿಸಲಾಗಿದೆ. ಹೀಗೆ ಸುಳ್ಳು ಸುಳ್ಳು ಕೇಸು ಹಾಕುವುದನ್ನು ಅಧಿಕಾರಿಗಳು ನಿಲ್ಲಿಸಬೇಕು ಎಂದರು.
ಅಕ್ರಮವಾಗಿ ಮರಳು ಸಾಗಾಣೆ ಮಾಡುವವರನ್ನು ಬಿಟ್ಟು ಪರ್ಮಿಟ್ ಇದ್ದವರ ವಿರುದ್ದವೇ ಕೇಸು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಉದ್ದಟತನದ ಮಾತನಾಡುತ್ತಾರೆ ಎಂದರು.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…