ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

ಕೂದಲನ್ನು ಉದ್ದ ಬಿಡದಿರಿ
ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ ಸಣ್ಣದಾಗಿ ಕಟ್ಟಿಂಗ್ ಮಾಡಿಸುವುದು ಹೆಚ್ಚು ಸೂಕ್ತ.
ಹಾಟ್ ಆಯಿಲ್ ಮಸಾಜ್
ಒತ್ತಡಯುಕ್ತ ಕೆಲಸ ಹಾಗೂ ಚಿಂತೆಯಿಂದಲೂ ಕೂದಲು ಉದುರುತ್ತವೆ. ಹೀಗಾಗಿ ನಿಗದಿತ ಸಮಯಕ್ಕೆ ಒಮ್ಮೆ ಚೆನ್ನಾಗಿ ಬಿಸಿ ತೈಲದ ಮಸಾಜ್ ಮಾಡಿಸಿಕೊಳ್ಳುವುದು ಒಳ್ಳೆಯದು.

ನಿಯಮಿತವಾಗಿ ಕೂದಲಿಗೆ ಬ್ರಶ್ ಹಾಕಿ
ಹೆಚ್ಚು ಕೂದಲನ್ನು ಬಾಚುವುದು, ಬ್ರಶ್ ಮಾಡುವುದರಿಂದ ಕೂದಲು ಇನ್ನೂ ಹೆಚ್ಚು ಉದುರುತ್ತವೆ ಎಂದು ಕೇಳಿರಬಹುದು. ಆದರೆ ಇವು ಸಂಪೂರ್ಣ ಸತ್ಯವಲ್ಲ. ನಿಯಮಿತವಾಗಿ ಬ್ರಶ್ ಹಾಕಿ ಕೂದಲನ್ನು ಸ್ವಚ್ಛಗೊಳಿಸುವುದರಿಂದ ಸತ್ತಿರುವ ಕೂದಲುಗಳು ಹೋಗುತ್ತವೆ. ಅಲ್ಲದೆ ತಲೆಯಲ್ಲಿ ರಕ್ತ ಸಂಚಾರವನ್ನೂ ಹೆಚ್ಚಿಸುತ್ತದೆ. ಬೇರುಗಳನ್ನು ಇನ್ನಷ್ಟು ಸದೃಢವನ್ನಾಗಿಸುತ್ತದೆ.
ಒದ್ದೆ ಕೂದಲನ್ನು ಟವಲ್ನಿಂದ ಕಟ್ಟಬೇಡಿ
ತಲೆ ಸ್ನಾನದ ಬಳಿಕ, ತಲೆಗೆ ಟವಲ್ ಸುತ್ತಿಕೊಳ್ಳುವುದು, ಕೂದಲನ್ನು ಟವಲ್ನಿಂದ ಮುಚ್ಚಿಟ್ಟುಕೊಳ್ಳುವ ಅಭ್ಯಾಸವಿರುತ್ತದೆ. ಇದನ್ನು ಮಾಡಲೇ ಬೇಡಿ. ಇದರಿಂದ ಕೂದಲುಗಳು ಇನ್ನಷ್ಟು ಉದುರುತ್ತವೆ.

ಕೂದಲನ್ನು ಫ್ಲಿಪ್ ಮಾಡಿ
ಉದ್ದ ಕೂದಲಿರುವವರು ನಿಯಮಿತವಾಗಿ ಮೇಲೆ ಕೆಳಗೆ ಫ್ಲಿಪ್ ಮಾಡುವುದರಿಂದ ಕೂದಲು ಬೆಳವಣಿಗೆಗೆ ಅನುಕೂಲವಾಗುತ್ತದೆ. ಕನಿಷ್ಟ 3 ನಿಮಿಷಗಳ ಕಾಲ ಮೇಲೆ ಕೆಳಗೆ ಕೂದಲನ್ನು ಫ್ಲಿಪ್ ಮಾಡಬಹುದು
ಚಿಂತೆಯನ್ನು ದೂರವಿಡಿ
ಚಿಂತೆ ಹೆಚ್ಚಾದರೆ ಕೇವಲ ಕೂದಲು ಮಾತ್ರವಲ್ಲದೆ ದೇಹದ ಆರೋಗ್ಯದಲ್ಲೂ ವ್ಯತ್ಯಯವಾಗುತ್ತದೆ. ಚಿಂತೆ, ಒತ್ತಡದ ಜೀವನದಿಂದ ಕೂದಲಿನ ಬೆಳವಣಿಗೆಗೆ ತುಂಬಾ ಸಮಸ್ಯೆ ಉಂಟಾಗುತ್ತದೆ. ಇದಕ್ಕಾಗಿಯೇ ಧ್ಯಾನ, ಯೋಗಾಸನ, ಪ್ರಾಣಾಯಾಮ ಸೇರಿ ಇನ್ನಿತರ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದು ಸೂಕ್ತ. ಒತ್ತಡದಿಂದ ಮುಕ್ತವಾದರೆ ಕೂದಲ ಬೆಳವಣಿಗೆ ಸಲೀಸಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.