ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು ವಿಶ್ವಸಂಸ್ಥೆ ಕೂಡ ಕೊರೋನಾ ಬಗ್ಗೆ ಭಾರಿ ಮಟ್ಟದಲ್ಲಿ ಕಳವಳ ವ್ಯಕ್ತ ಪಡಿಸಿದೆ, ಪ್ರಪಂಚದ 94 ರಾಷ್ಟ್ರಗಳು ಹಾಗು ಹಲವು ಭಾಗಗಳಲ್ಲಿ ಕೊರೋನಾ ಹರಡಿರುವ ಬಗ್ಗೆ ವರದಿಯಾಗಿದೆ.

ಚೀನಾದಲ್ಲಿ ಸಾವಿರಾರು ಮಂದಿಯ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಪ್ರಕರಣ ಕರ್ನಾಟಕದಲ್ಲಿ ಕೂಡ ವರದಿಯಾಗಿದೆ. ಮೊದಲಿಗೆ ಹೈದರಾಬಾದ್ ನ ಟೆಕ್ಕಿ ಗೆ ಕೊರೋನಾ ಸೋಂಕು ತಗುಲಿ ನಂತರ ಬೆಂಗಳೂರಿನಿಂದ ಆತ ತನ್ನ ಊರಿಗೆ ಪ್ರಯಾಣಿಸಿದ್ದಾನೆ ಎಂದು ವರದಿಯಾಗಿತ್ತು, ಇದಾದ ಬಳಿಕ ಬೆಂಗಳೂರಿನಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಸದ್ಯಕ್ಕೆ ಒಂದೆಡೆ ಕೊರೋನಾ ಭೀತಿಯಿಂದ ಬದುಕುತ್ತಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ, ಹೌದು ಸದ್ಯಕ್ಕೆ ಕರುನಾಡಿಗೆ ನೆರೆ ರಾಜ್ಯದಿಂದ ಬಂದಿರುವ ಆ ಒಂದು ಸುದ್ದಿ ಮತ್ತಷ್ಟು ಸಂಕಷ್ಟ ತರಿಸಿದೆ.

ಒಂದು ಕಡೆ ಕರೋನ ವೈರಸ್ ನಿಂದ ಭಯಭೀತರಾಗಿದ್ದಾರೆ ಇನ್ನೊಂದು ಕೇರಳದ ಕೋಳಿಕೋಡ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೋಳಿ ಫಾರಂ ಹಾಗೂ ಖಾಸಗಿ ನರ್ಸರಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಕೂಡಲೇ ಕೇರಳ ಪಶುಸಂಗೋಪನಾ ಇಲಾಖೆ ತುರ್ತು ಸಭೆ ಕರೆದಿದೆ. ಪ್ರತಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಸಾಯುತ್ತಿರುವುದರಿಂದ ಅನುಮಾನಗೊಂಡ ಕೋಳಿ ಸಾಕಾಣಿಕೆಗಾರರು ಕೋಳಿಗಳನ್ನ ಕಣ್ಣೂರು ಲ್ಯಾಬ್ ಮತ್ತು ಭೋಪಾಲ್ ಲ್ಯಾಬ್ ಗಳಿಗೆ ಕಳುಹಿಸಿದ್ದರು, ಇನ್ನು ಇನ್ನು ಲ್ಯಾಬ್ ಗೆ ಕಳುಹಿಸಲಾಗಿದ್ದ ಕೋಳಿಗಳನ್ನ ಪರಿಶೀಲನೆ ಮಾಡಿದಾಗ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.

ರೋಗವು ನಿಯಂತ್ರಣದಲ್ಲಿದೆ ಮತ್ತು ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಕೇರಳದ ಅರೋಗ್ಯ ಇಲಾಖೆ ತಿಳಿಸಿದೆ, ಆದರೆ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಎಚ್ಚರಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇದು 2016 ರ ನಂತರ ಏಕಾಏಕಿ ರಾಜ್ಯದಲ್ಲಿ ಬರ್ಡ್ ಫ್ಲೂ ಪ್ರಕರಣವಾಗಿದೆ, ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ರೋಗಗಳ ಅನುಮಾನ ಹೊರಹೊಮ್ಮಿತು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹಕ್ಕಿಗಳ ಸಾವಿನ ಬಗ್ಗೆ ನಮಗೆ ಗುರುವಾರವಾಷ್ಟೇ ಮಾತ್ರ ಮಾಹಿತಿ ನೀಡಲಾಯಿತು, ಕೂಡಲೇ ನಾವು ಪರೀಕ್ಷಾ ಮಾದರಿಗಳನ್ನು ಕಣ್ಣೂರು ಪ್ರಯೋಗಾಲಯಕ್ಕೆ ಮತ್ತು ನಂತರ ಭೋಪಾಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ನಾವು ಇನ್ನೂ ಮುಖ್ಯ ಕಾರ್ಯದರ್ಶಿಯಿಂದ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶುಸಂಗೋಪನಾ ಅಧಿಕಾರಿ ಕೆ ಸಿಂಧು ಹೇಳಿದರು.
ವರದಿಗಳ ಪ್ರಕಾರ ಭೋಪಾಲ್ ಪ್ರಯೋಗಾಲಯದಿಂದ ಹಕ್ಕಿ ಜ್ವರ ಧ್ರಡೀಕರಣವಾಗಿದೆ, ಹೀಗಾಗಿ ಗಡಿಭಾಗ ಆಗಿರುವುದರಿಂದ ಕರ್ನಾಟಕ ಕೂಡ ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ, ಒಂದೆಡೆ ಕೊರೋನಾ ಇನ್ನೊಂದೆಡೆ ಹಕ್ಕಿ ಜ್ವರ ಇವೆರಡು ಈಗ ಕರ್ನಾಟಕಕ್ಕೆ ಸಂಕಷ್ಟ ತಂದಿದೆ ಎನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…