ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿಯವರು ಎಲ್ಲೂ ಕಾಣಿಸುತ್ತಿಲ್ಲ. ಗೋಕಾಕ್ ನಲ್ಲೂ ಇಲ್ಲ. ಬೆಂಗಳೂರಿನಲ್ಲೂ ಇಲ್ಲ. ಈ ಮೂಲಕ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿ ಗೌಪ್ಯ ಜಾಗಕ್ಕೆ ಹೋದ್ರಾ ಎಂಬ ಪ್ರಶ್ನೆ ಎದ್ದಿದೆ.

ಯಾರ್ಯಾರು ರಾಜೀನಾಮೆ?:
ಗಣೇಶ್, ಕಂಪ್ಲಿ ಶಾಸಕ
ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ
ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ
ಮಹೇಶ್ ಕುಮಟಳ್ಳಿ, ಅಥಣಿ ಶಾಸಕ
ಬಿಸಿ ಪಾಟೀಲ್, ಹಿರೆಕೇರೂರು ಶಾಸಕ
ಶ್ರೀಮಂತ್ ಪಾಟೀಲ್, ಕಾಗವಾಡ ಶಾಸಕ
ನಾರಾಯಣಗೌಡ, ಕೆಆರ್ ಪೇಟೆ ಶಾಸಕ
ಮಹಾದೇವ್, ಪಿರಿಯಾಪಟ್ಟಣ ಶಾಸಕ
ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಶಾಸಕ
ಬಸವರಾಜ್ ದದ್ದಲ್- ರಾಯಚೂರು ಗ್ರಾಮೀಣ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಆನಂದ್ ಸಿಂಗ್ ರಾಜಿನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಅಸಮಧಾನಗೊಂಡಿದ್ದರು. ಜಿಂದಾಲ್ ವಿಚಾರಕ್ಕೆ ಅವರು ರಾಜಿನಾಮೆ ಕೊಟ್ಟಿರಬಹುದು. ಅವರ ಜೊತೆ ಬೇರೆ ಯಾವ ಶಾಸಕರೂ ಇಲ್ಲ. ಇದ್ದಿದ್ದರೆ ಉಳಿದವರು ರಾಜೀನಾಮೆ ಕೊಡುತ್ತಿದ್ದರು ಎಂದು ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಬೇರೆ ಯಾವ ಶಾಸಕರೂ ರಾಜೀನಾಮೆ ಕೊಡಲ್ಲ. ಅದು ಕೇವಲ ಊಹಾಪೋಹ. ಸರ್ಕಾರ ಬೀಳಿಸುವ ಉದ್ದೇಶದಿಂದ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಎಂದು ನಾಡಗೌಡ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…