ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ.

ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ 2 ವರ್ಷಗಳವರೆಗೆ ದಾಸ್ತಾನು ಮಾಡಬಹುದು. ಆಹಾರವಸ್ತುವಾಗಿ ಬಳಸಬಹುದಾಗಿದೆ ಎಂಬ ಅಂಶ ಅವರ ಗಮನಸೆಳೆದಿದೆ. 20ಎಕರೆ ಪ್ರದೇಶದಲ್ಲಿ ನುಗ್ಗೆ ಸಸಿಗಳನ್ನು ನಾಟಿ ಮಾಡಿದ್ದಾರೆ. ತಮ್ಮ ಹೊಲಕ್ಕೆ ಹೊಂದಿಕೊಂಡಿರುವ ಇತರ ರೈತರ 15 ಎಕರೆಯನ್ನು ಲೀಸ್ಗೆ ಪಡೆದು ಅಲ್ಲೂ ನುಗ್ಗೆ ಸಸಿಗಳನ್ನು ಬೆಳೆಸಿದ್ದಾರೆ.

ಪೌಡರ್ ತಯಾರಿಸುವ ವಿಧಾನ:
ನುಗ್ಗೆ ಸಸಿಗಳಲ್ಲಿ ಕಾಯಿಯಾಗುವವರೆಗೆ ಈ ರೈತ ಕಾಯುವುದಿಲ್ಲ. ಗಿಡಗಳಲ್ಲಿನ ಸೊಪ್ಪನ್ನು ಆಗಾಗ್ಗೆ ಕೊಯ್ಲು ಮಾಡುತ್ತಾರೆ. ಎಲೆಗಳ ಬಣ್ಣ ಕೆಡದಂತೆ ಪಾಲಿ ಡ್ರೈಯಿಂಗ್ ವಿಧಾನದ ಮೂಲಕ ಕನಿಷ್ಠ 26 ಡಿಗ್ರಿ, ಗರಿಷ್ಠ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಲಾಗುತ್ತದೆ. ನಂತರ ಪೌಡರ್ಮಾಡಿ ಪ್ಯಾಕ್ ಮಾಡಲಾಗುತ್ತದೆ.
ಹಸಿ ಎಲೆಗಳನ್ನು ನೇರವಾಗಿ ಅಡುಗೆಗೆ ಅಥವಾ ಸೇವನೆಗೆ ಬಳಸಲು ಜನರು ಹಿಂದೇಟು ಹಾಕುತ್ತಾರೆ. ನಿಗದಿತ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಿ ಪೌಡರ್ ತಯಾರಿಸಿ ಮಾರಾಟ ಮಾಡಿದರೆ ಬೇಡಿಕೆಯ ಜತೆಗೆ ಬೆಲೆಯೂ ಹೆಚ್ಚು ಎಂಬುದು ರೈತ ಬಸಯ್ಯ ಹಿರೇಮಠ ಅವರ ಅನುಭವದ ಮಾತಾಗಿದೆ. ಹೀಗೆ ಸ್ಥಳೀಯವಾಗಿ ತಯಾರಿಸಿದ ನುಗ್ಗೆ ಪೌಡರ್ಗೆ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಂದ ಆರ್ಡರ್ ಬಂದಿರುವುದೇ ಅವರ ಉತ್ಸಾಹ ಇಮ್ಮಡಿಗೊಳಿಸಿದೆ.

ನುಗ್ಗೆ ಎಲೆಯಲ್ಲಿ ಸಾಕಷ್ಟು ಪೋಷಕಾಂಶಗಳು ಇರುವುದು ಪ್ರಯೋಗಗಳಿಂದ ರುಜುವಾತಾಗಿದೆ. ಇದರಲ್ಲಿ ಪೊಟ್ಯಾಷಿಯಂ, ಅಮಿನೋ ಆ್ಯಸಿಡ್, ಕ್ಯಾಲ್ಸಿಯಂ, ಕಬ್ಬಿಣಾಂಶ, ಕ್ಲೊರೊಫೆರಿಲ್ ನಾರಿನಾಂಶ ಇದೆ. ಮಧುಮೇಹ ರೋಗಿಗಳಿಗೆ ಇದು ಸೂಕ್ತ ಆಹಾರ. ಬಿ.ಪಿ. ನಿಯಂತ್ರಿಸುವ, ಕ್ಯಾನ್ಸರ್ಕಾರಕ ಅಂಶಗಳನ್ನು ನಾಶಮಾಡುವ ಗುಣವನ್ನು ನುಗ್ಗೆ ಸೊಪ್ಪು ಹೊಂದಿದೆ. ಸೊಪ್ಪನ್ನು ಸಾಂಬರ್ಗೆ ಹಾಕಬಹುದಾಗಿದೆ.
ನುಗ್ಗೆ ಸೊಪ್ಪಿನಿಂದ ಪೌಡರ್ ತಯಾರಿಸುವ ಘಟಕ ಆರಂಭಿಸುವುದಾಗಿ ಬಸಯ್ಯ ಹಿರೇಮಠ ಹೇಳಿದಾಗ ಆ ಬಗ್ಗೆ ಅಧ್ಯಯನ ನಡೆಸಲಾಯಿತು. ವೈಜ್ಞಾನಿಕವಾಗಿ ಇದು ಎಷ್ಟು ಸರಿ ಎಂಬುದನ್ನು ನಾನಾ ಆಕರಗಳ ಮೂಲಕ ತಿಳಿದು, ನುಗ್ಗೆ ಬೆಳೆ ಮತ್ತು ಪ್ರೊಸೆಸಿಂಗ್ ಯುನಿಟ್ಗೆ ಇಲಾಖೆಯಿಂದ ನೆರವು ನೀಡಲು ಪ್ರಸ್ತಾವನೆ ಕಳುಹಿಸಲಾಗಿತ್ತು. ಇದೀಗ ಅದು ಸಾಕಾರಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ…