News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

35

ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್‍ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

ಮೊದಲ ಹತ್ತು ಆರೋಗ್ಯಕರ ರಾಜ್ಯಗಳು

  1. ಕೇರಳ
  2. ಆಂಧ್ರ ಪ್ರದೇಶ
  3. ಮಹಾರಾಷ್ಟ್ರ
  4. ಗುಜರಾತ್
  5. ಪಂಜಾಬ್
  6. ಹಿಮಾಚಲ ಪ್ರದೇಶ
  7. ಜಮ್ಮು -ಕಾಶ್ಮೀರ
  8. ಕರ್ನಾಟಕ
  9. ತಮಿಳುನಾಡು
  10. ತೆಲಂಗಾಣ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…