ಕೆಲವರು
ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು
ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ
ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ
ಒಪ್ಪಿಕೊಂಡಿದೆ.
ಊಟದ
ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ
ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು ಮಸಾಲಾ
ಟೀ ಅಲ್ಲ, ಬಿಸಿ ನೀರಿಗೆ ಸ್ವಲ್ಪ ಗ್ರೀನ್ ಟೀ ಹಾಕಿಕೊಂಡು ಕುಡಿಯುವುದು.
ಜಪಾನ್
ನಲ್ಲಿ ಪ್ರತಿನಿತ್ಯ ಬೆಳಗ್ಗೆ ಎದ್ದ ತಕ್ಷಣ ಬ್ರಷ್ ಮಾಡುವುದಕ್ಕೂ ಮುನ್ನ 4 ಗ್ಲಾಸ್ ಬಿಸಿನೀರು
ಕುಡಿಯುತ್ತಾರೆ. ಮೊದಲು ಒಂದು ಗ್ಲಾಸ್ ನಿಂದ ಈ ಥೆರಪಿ ಆರಂಭಿಸಿ, ನಿಧಾನವಾಗಿ 4 ಗ್ಲಾಸ್ ಗೆ
ಹೆಚ್ಚಿಸಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಸೇವಿಸುವುದರಿಂದ ಮಲಬದ್ಧತೆ
ಉಂಟಾಗುವುದಿಲ್ಲ. ಹೊಟ್ಟೆ ಊದಿಕೊಳ್ಳುವುದು, ಹೊಟ್ಟೆ ನೋವು ಎಲ್ಲವನ್ನೂ ಇದು ಕಡಿಮೆ ಮಾಡುತ್ತದೆ.
ಬಿಸಿನೀರು
ಸೇವನೆ ಚರ್ಮಕ್ಕೂ ಹೊಳಪು ತರಬಲ್ಲದು. ನಿಮ್ಮ ದೇಹದ ಉಷ್ಣತೆಯನ್ನು ಹೆಚ್ಚಿಸುವ ಮೂಲಕ ಬಿಸಿನೀರು
ಟಾಕ್ಸಿನ್ ಗಳನ್ನು ಹೊರಹಾಕುತ್ತದೆ. ಹಾಗಾಗಿ ಚರ್ಮಕ್ಕೆ ಹೊಳಪು ಬರುತ್ತದೆ. ಬಿಸಿನೀರು ಸೇವನೆ
ಹಸಿವನ್ನು ಉತ್ತೇಜಿಸುತ್ತದೆ. ನೀರಿನ ಬಿಸಿಯನ್ನು ಕಡಿಮೆ ಮಾಡಲು ನಮ್ಮ ದೇಹ ಶ್ರಮಿಸುತ್ತದೆ,
ಇದರಿಂದ ಚಯಾಪಚಯ ವ್ಯವಸ್ಥೆ ಉತ್ತಮಗೊಳ್ಳುತ್ತದೆ. ನಿಮ್ಮ ದೇಹ ಹೆಚ್ಚು ಆಹಾರವನ್ನು ಬೇಡುತ್ತದೆ.
ಜೀರ್ಣಕ್ರಿಯೆಗೂ
ಬಿಸಿನೀರು ಸೇವನೆ ಸಹಕಾರಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿದ್ರೆ ನಿಮ್ಮ ಕಿಡ್ನಿ
ಮತ್ತು ಲಿವರ್ ಕಾರ್ಯಾಚರಣೆ ಉತ್ತಮಗೊಳ್ಳುತ್ತದೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ
ಆಗುತ್ತದೆ. ಗಂಟಲು ಕೆರೆತ, ಶೀತ ಇವೆಲ್ಲದರಿಂದ್ಲೂ ಪಾರಾಗಬಹುದು. ಶೀತವಾದಾಗ ಕೂಡ
ಬಿಸಿನೀರನ್ನೇ ಕುಡಿಯುವುದು ಉತ್ತಮ.
ಮುಟ್ಟಿನ
ಸೆಳೆತ ಮತ್ತು ನೋವಿನಿಂದ್ಲೂ ಬಿಸಿನೀರು ಪರಿಹಾರ ಒದಗಿಸುತ್ತದೆ. ಹೊಟ್ಟೆನೋವು ಬಂದಾಗ ಬಿಸಿನೀರಿನ
ಬ್ಯಾಗ್ ಅನ್ನು ಹೊಟ್ಟೆಮೇಲಿಟ್ಟುಕೊಂಡರೆ ರಿಲೀಫ್ ಸಿಗುತ್ತದೆ. ಬಿಸಿನೀರನ್ನು ಕುಡಿಯುವದರಿಂದ್ಲೂ
ನೋವು ಕಡಿಮೆಯಾಗುತ್ತದೆ. ಬೇಗ ವೃದ್ಧಾಪ್ಯ ನಿಮ್ಮನ್ನು ಆವರಿಸಿಕೊಳ್ಳದಂತೆ ಬಿಸಿನೀರು
ತಡೆಯುತ್ತದೆ. ಬಿಸಿನೀರು ದೇಹದಿಂದ ಟಾಕ್ಸಿನ್ ಗಳನ್ನು ಹೊರಹಾಕುವುದರಿಂದ ನಿಮ್ಮ ಚರ್ಮ ಬೇಗನೆ
ಸುಕ್ಕಾಗುವುದಿಲ್ಲ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…