ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.
ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.
ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.
ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.
ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…