ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.
ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.
ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.
ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.
ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….