ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು.
ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.
ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.
1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.
ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…