ಉಪಯುಕ್ತ ಮಾಹಿತಿ

ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

278

ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ.

ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ.

ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149 ಜನರನ್ನು ಅಧ್ಯಯನಕ್ಕೊಳಪಡಿಸಲಾಗಿತ್ತು.

149 ಜನರ ಪೈಕಿ ಕೆಲವರು ಮಲಗುವುದಕ್ಕೂ ಮುನ್ನ ಯೋಗ ಸಂಗೀತವನ್ನು ಆಲಿಸಿದರೆ, ಇನ್ನು ಕೆಲವರು ಪಾಪ್ ಮ್ಯೂಸಿಕ್ ಗೆ ಕಿವಿಕೊಟ್ಟಿದ್ದರು, ಮತ್ತೆ ಕೆಲವರು ಯಾವುದೇ ಸಂಗೀತವನ್ನೂ ಕೇಳದೇ ಹಾಗೆಯೇ ನಿದ್ದೆ ಮಾಡಿದ್ದರು.

ಸಮೀಕ್ಷೆಗೊಳಪಡಿಸಲಾಗಿದ್ದ ವ್ಯಕ್ತಿಗಳ ಹೃದಯ ಬಡಿತವನ್ನು ಸೆಷನ್ ನಲ್ಲಿಯೂ ಸಂಗೀತ ನಿಲ್ಲುವುದಕ್ಕೆ ಅಥವಾ ನಿಶಬ್ದ ಮೂಡುವುದಕ್ಕೂ 5 ನಿಮಿಷಗಳ ಮುನ್ನ ಮಾಪನ ಮಾಡಲಾಗಿತ್ತು. ಇದರ ಜೊತೆಗೆ ಆಂಕ್ಸೈಟಿ ಮಟ್ಟವನ್ನೂ ಮಾಪನ ಮಾಡಲಾಗಿತ್ತು,

ಯೋಗ ಸಂಗೀತ ಕೇಳುವ ವೇಳೆಯಲ್ಲಿ ಹೃದಯ ಬಡಿತ ವ್ಯತ್ಯಾಸ ಹೆಚ್ಚಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳುವ ವೇಳೆಯಲ್ಲಿ ಇಳಿಕೆಯಾಗಿತ್ತು, ನಿಶಬ್ದವಾಗಿದ್ದಾಗ ಯಾವುದೇ ಬದಲಾವಣೆಗಳೂ ಇರಲಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಇನ್ನು ಯೋಗ ಸಂಗೀತ ಕೇಳುತ್ತಿದ್ದವರ ಆಂಕ್ಸೈಟಿ (ಆತಂಕ ಮಟ್ಟ) ಮಟ್ಟ ಕಡಿಮೆಯಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳಿದ ನಂತರ ಹಾಗೂ ಯಾವುದೇ ಸಂಗೀತ ಕೇಳದಿದ್ದಾಗ ಆಂಕ್ಸೈಟಿ ಮಟ್ಟ ಹೆಚ್ಚಿರುವುದು ಸಮೀಕ್ಷೆಯಲ್ಲಿ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….