ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ.

ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ ಸಿಕ್ಕಿಬಿದ್ದಿದ್ದು, ಹಾಸ್ಟೆಲ್ ಸಿಬ್ಬಂದಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಧ್ಯ ರಾತ್ರಿಯೇ ಈ ಯುವಕ ಒಳ ಚರಂಡಿ ಪೈಪ್ ಲೈನ್ ಮೂಲಕ ಹಾಸ್ಟೆಲ್ ಪ್ರವೇಶಿಸಿದ್ದಾನೆ. ಅಲ್ಲಿ ಹುಡುಗಿಯರ ಬಾತ್ ರೂಂ ಬಳಿ ಕತ್ತಲಿನಲ್ಲಿ ಸುಮ್ಮನೆ ಕುಳಿತುಕೊಂಡಿದ್ದಾನೆ. ಆದರೆ ರಾತ್ರಿ ಹುಡುಗಿಯೊಬ್ಬಳು ಬಾತ್ ರೂಂಗೆ ತೆರೆಳಿದಾಗ, ಕತ್ತಲ್ಲಲ್ಲಿ ಯಾರೋ ಕೂತಿರುವುದು ಕಾಣಿಸಿ ಜೋರಾಗಿ ಕಿರುಚಿಕೊಂಡಿದ್ದಾಳೆ. ತಕ್ಷಣ ಹುಡುಗಿಯರು ಹಾಗೂ ವಾರ್ಡನ್ ಅಲ್ಲಿಗೆ ಬಂದಾಗ ಯುವಕ ಸಿಕ್ಕಿಬಿದ್ದಿದ್ದಾನೆ.

ಎಲ್ಲರೂ ಸ್ಥಳಕ್ಕೆ ಬಂದಾಗ ಭಯದಲ್ಲಿ ಯುವಕ ಪೈಪ್ ಲೈನ್ ಮೂಲಕ ಕೆಳಗಿಳಿಯುವ ಪ್ರಯತ್ನ ನಡೆಸಿದ್ದಾನೆ. ಆದರೆ ಅಷ್ಟರಲ್ಲಿ ಹುಡುಗಿಯರು ಆತನನ್ನು ಹಿಡಿದು ಸಖತ್ ಗೂಸ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿ ಆತನನ್ನು ಜೈಲಿಗಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…