News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

20

100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವೃದ್ಧೆಯ ಮಗಳು ಗುಂಜ ದೇವಿ ಬೇರೆ ದಾರಿಯಿಲ್ಲದೆ ಈ ರೀತಿಯಾಗಿ ಬ್ಯಾಂಕಿಗೆ ಕರೆತಂದಿದ್ದಾರೆ.

27 ನಿಮಿಷದ ವಿಡಿಯೋದಲ್ಲಿ 60 ವರ್ಷದ ಮಹಿಳೆ ಬಾರ್ಗಾಂವ್ ಗ್ರಾಮದಲ್ಲಿ ತನ್ನ ವೃದ್ಧ ತಾಯಿಯನ್ನು ಮಂಚದ ಮೇಲೆ ಮಲಗಿಸಿಕೊಂಡು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಹೀಗೆ ತನ್ನ ತಾಯಿಯನ್ನು ಮಗಳು ಕರೆದುಕೊಂಡು ಹೋಗುತ್ತಿರುವುದು ಉತ್ಕಲ್‍ನ ಗ್ರಾಮೀಣ ಬ್ಯಾಂಕಿಗೆ.

ಈ ವಿಡಿಯೋ ಸಾಮಾಜಿಕ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದ ಗುಂಜ, ನನ್ನ ತಾಯಿಯ ಹಣವನ್ನು ಡ್ರಾ ಮಾಡಿಕೊಳ್ಳಲು ನನಗೆ ಅವಕಾಶ ನೀಡಿ ಎಂದು ಬ್ಯಾಂಕ್ ಮ್ಯಾನೇಜರ್ ಅವರನ್ನು ಪರಿಪರಿಯಾಗಿ ಬೇಡಿಕೊಂಡೆ. ಯಾಕೆಂದರೆ ಆಕೆಗೆ ಎದ್ದು ನಡೆಯಲು ಆಗುತ್ತಿಲ್ಲ. ನಮಗೆ ಹಣದ ಅವಶ್ಯಕತೆ ಇದೆ. ಹೀಗಾಗಿ ದಯಮಾಡಿ ಹಣ ಡ್ರಾ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡೆ. ಆದರೆ ಬ್ಯಾಂಕ್ ಮ್ಯಾನೇಜರ್ ಇದಕ್ಕೆ ಸುತರಾಂ ಒಪ್ಪಲಿಲ್ಲ. ಬದಲಾಗಿ ಭೌತಿಕ ಪರಿಶೀಲನೆ ನಡೆಸಬೇಕು. ಹೀಗಾಗಿ ಅಗತ್ಯವಾಗಿ ನೀವು ಅವರನ್ನು ಕರೆದುಕೊಂಡು ಬರಲೇಬೇಕು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.