ಸುದ್ದಿ

ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

150

ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್​ಕೌಂಟರ್​ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…

  • ವಿಚಿತ್ರ ಆದರೂ ಸತ್ಯ

    ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

    ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…