ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್ಕೌಂಟರ್ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.