News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

119

ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಅಲ್ಲದೆ ಈ ಖುಷಿ ಕ್ಷಣಗಳ ವಿಡಿಯೋವನ್ನು ಸೆರೆಹಿಡಿದಿದ್ದು, ವಿಡಿಯೋಗೆ `ಸವಿ ಸವಿ ನೆನಪು’ ಎಂಬ ಮೈ ಆಟೋಗ್ರಾಫ್ ಚಿತ್ರದ ಹಾಡನ್ನು ಹಾಕಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ನೆನಪಿಗೆ ಬಂದ ಆ ಬಾಲ್ಯದ ದಿನಗಳು. ನಿನ್ನೆ ಕುಟುಂಬದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಂಧ್ರಪ್ರದೇಶದಲ್ಲಿರುವ ನಮ್ಮ ಮಾವನವರ ಊರಿಗೆ ತೆರಳಿದ್ದೆ. ಅದೇ ಸಮಯದಲ್ಲಿ ನಮ್ಮ ಮಾವನವರ ತೋಟಕ್ಕೆ ನನ್ನ ಧರ್ಮಪತ್ನಿ ಲಕ್ಷ್ಮಿ ಅರುಣಾ ಜೊತೆಗೆ ಭೇಟಿ ಕೊಟ್ಟಿದ್ದೆ.

ತೋಟದಲ್ಲಿ 27 ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು. ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತು ನನ್ನ ಶ್ರೀಮತಿಗೆ ನೀಡಿದೆ. ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು, ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು ಎಂದು ಬರೆದು ವಿಡಿಯೋದೊಂದಿಗೆ ಅಪ್ಲೋಡ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.

  • ಸಿನಿಮಾ

    32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿ, ಇಪ್ಪತ್ತೈದು ವರ್ಷಗಳಿಂದ ಥಿಯೇಟರ್ಗೆ ಕಾಲಿಟ್ಟಿಲ್ಲದ ನಟ..!ತಿಳಿಯಲು ಇದನ್ನು ಓದಿ ..

    ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್​ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..