News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

119

ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ಅಲ್ಲದೆ ಈ ಖುಷಿ ಕ್ಷಣಗಳ ವಿಡಿಯೋವನ್ನು ಸೆರೆಹಿಡಿದಿದ್ದು, ವಿಡಿಯೋಗೆ `ಸವಿ ಸವಿ ನೆನಪು’ ಎಂಬ ಮೈ ಆಟೋಗ್ರಾಫ್ ಚಿತ್ರದ ಹಾಡನ್ನು ಹಾಕಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ನೆನಪಿಗೆ ಬಂದ ಆ ಬಾಲ್ಯದ ದಿನಗಳು. ನಿನ್ನೆ ಕುಟುಂಬದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಂಧ್ರಪ್ರದೇಶದಲ್ಲಿರುವ ನಮ್ಮ ಮಾವನವರ ಊರಿಗೆ ತೆರಳಿದ್ದೆ. ಅದೇ ಸಮಯದಲ್ಲಿ ನಮ್ಮ ಮಾವನವರ ತೋಟಕ್ಕೆ ನನ್ನ ಧರ್ಮಪತ್ನಿ ಲಕ್ಷ್ಮಿ ಅರುಣಾ ಜೊತೆಗೆ ಭೇಟಿ ಕೊಟ್ಟಿದ್ದೆ.

ತೋಟದಲ್ಲಿ 27 ವರ್ಷಗಳ ಹಿಂದೆ ನೆಟ್ಟಿದ್ದ ಮಾವಿನ ಗಿಡಗಳು ಹೆಮ್ಮರವಾಗಿ ಬೆಳೆದು ಮಾವಿನ ಹಣ್ಣುಗಳಿಂದ ತುಂಬಿಕೊಂಡ ದೃಶ್ಯ ಮನ ಸೆಳೆಯಿತು. ಕೂಡಲೇ ನಾನೇ ಮರವನ್ನು ಹತ್ತಿ ಮಾವಿನ ಹಣ್ಣನ್ನು ಕಿತ್ತು ನನ್ನ ಶ್ರೀಮತಿಗೆ ನೀಡಿದೆ. ಮರವೇರಿ ಇಳಿದ ತಕ್ಷಣ ಬಾಲ್ಯದ ದಿನಗಳಲ್ಲಿ ಸ್ನೇಹಿತರೊಂದಿಗೆ ಸೇರಿ ಮರವೇರಿ ಆಡುತ್ತಿದ್ದ ಆಟಗಳು, ಜೊತೆಯಲ್ಲಿದ್ದ ಸ್ನೇಹಿತರು ನೆನಪಿಗೆ ಬಂದರು ಎಂದು ಬರೆದು ವಿಡಿಯೋದೊಂದಿಗೆ ಅಪ್ಲೋಡ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….