News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

60

ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್‍ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಉಪಯುಕ್ತ ಮಾಹಿತಿ

    ಮೀಸಲಾತಿ ಯಾ‌ರ‌್ಯಾರಿಗೆ ಇದೆ.?ಎಷ್ಟಿದೆ..‌?ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ.?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್‌ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾ‌ರ‌್ಯಾರಿಗೆ ಇದೆ..? ಎಷ್ಟಿದೆ..‌? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…