News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

62

ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್‍ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • ಉಪಯುಕ್ತ ಮಾಹಿತಿ

    ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

    ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ದೇವರು-ಧರ್ಮ

    ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

    ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…