ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…