News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

60

ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್‍ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ತಂಡದ ಈ ಆಟಗಾರ ಸಿಕ್ಸರ್ ಕಿಂಗ್, ಪತ್ನಿ ಬಿಕಿನಿ ಕ್ವೀನ್.!ಯಾರು ಗೊತ್ತ.?ತಿಳಿಯಲು ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಸುದ್ದಿ

    ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

     ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…