ಸುದ್ದಿ

ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

59

ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್‍ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಿಂದೂ ಧರ್ಮದಲ್ಲಿ ಒಂದೇ ಗೋತ್ರ ಇರುವವರಿಗೆ ಮದುವೆ ಮಾಡುವುದಿಲ್ಲ..!ಏಕೆ ಗೊತ್ತಾ..?

    ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…

  • inspirational

    ತಣ್ಣೀರು ಸ್ನಾನದ ಉಪಯೋಗಗಳು ಗೊತ್ತಾದ್ರೆ, ನೀವ್ ತಣ್ಣೀರು ಸ್ನಾನ ಮಾಡೋದಕ್ಕೆ ಶುರುಮಾಡ್ತೀರಾ..!

    ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ವಿಸ್ಮಯ ಜಗತ್ತು

    ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

    ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…