News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

62

ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್‍ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಧನಲಾಭವಾಗಲಿದೆ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…