ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.

ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.

ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.