ಆಟೋಮೊಬೈಲ್ಸ್

ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

69

ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ

ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಇದೇ ಜೂನ್ 11 ರಂದು ರಿಲೀಸ್‌ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್‌ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಮೇನ್‌ ಅಟ್ರ್ಯಾಕ್ಷನ್‌ ಫ್ಲಿಪ್‌ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್‌ . ಹೆಚ್‌ಡಿ ಡಿಸ್‌ಪ್ಲೇ ಆಸೂಸ್‌ ಝೆನ್‌ಫೋನ್ 6 ಸ್ಮಾರ್ಟ್‌ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್‌ LCD ಮಾದರಿಯಲ್ಲಿದೆ. ಡಿಸ್‌ಪ್ಲೇಯ ಸುತ್ತಲೂ ನಾಚ್‌ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್‌ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್‌ಫೋನ್‌ ಅಂದವನ್ನು ಹೆಚ್ಚಿಸಿದೆ.

ಬಲವಾದ ಪ್ರೊಸೆಸರ್ ಆಸೂಸ್‌ನ ಈ ಸ್ಮಾರ್ಟ್‌ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್‌ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.

ಕ್ಯಾಮೆರಾ ವಿಶೇಷತೆ ಝೆನ್‌ಫೋನ್‌ 6 ಸ್ಮಾರ್ಟ್‌ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್‌ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್‌ ಆಂಗಲ್ ಲೆನ್ಸ್‌ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್‌ ಝೆನ್‌ಫೋನ್ 6 ಸ್ಮಾರ್ಟ್‌ಫೋನಿಗೆ 5000mAh ಸಾಮರ್ಥ್ಯದ ಪವರ್‌ಫುಲ್‌ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್‌ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್‌ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಗ್ರಾಹಕರಿಗೊಂದು ಖುಷಿಯ ಸುದ್ದಿ ‘ಜಿಯೋ 4ಜಿ ಫೀಚರ್ ಫೋನ್ ‘ ..!ತಿಳಿಯಲು ಈ ಲೇಖನ ಓದಿ ..

    ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…