News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

106

ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…