ಸುದ್ದಿ

40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

105

ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…