ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್.
ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್. ಹೀಗಾಗಿಯೇ ಕೆಜಿಎಫ್ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್ನ್ನ ಬ್ರಿಟೀಷರು ಮಿನಿ ಲಂಡನ್ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್ಗೆ ಇರಲಿಲ್ಲ.

ವಿಶ್ವಬ್ಯಾಂಕ್ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್. ಕೋಲಾರ ಗೋಲ್ಡ್ ಫೀಲ್ಡ್ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್ನ ಪಾತ್ರ ಬಹಳಷ್ಟಿದೆ. ಕೆಜಿಎಫ್ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್ ಎನ್ನುವುದನ್ನ ದೇಶ ಮರೆಯುವಂತಿಲ್ಲ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…