News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1012

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….