ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ .

ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು ಪ್ರಯತ್ನಿಸುತ್ತೇನೆ. ನೀವು ಅತ್ಯುತ್ತಮ ನಟರಾಗಿದ್ದು, ನಾನು ನಿಮ್ಮ ಸಿನಿಮಾಗಳನ್ನು ನೋಡಲು ಇಷ್ಟಪಡುತ್ತೇನೆ. ನೀವು ನಟಿಸಿದ ಪುಲಿ, ಕೋಟಿಗೊಬ್ಬ, ಹೆಬ್ಬುಲಿ, ಪೈಲ್ವಾನ್ ಸಿನಿಮಾಗಳನ್ನು ನೋಡಿದ್ದೇನೆ. ನೀವು ಯಾವಾಗಲೂ ಸಂತೋಷವಾಗಿ ಹಾಗೂ ಆರೋಗ್ಯವಾಗಿ ಇರಬೇಕು ಎಂದು ಬಯಸುತ್ತೇನೆ. ನೀವು ನಮಗೆ ಮನರಂಜನೆ ನೀಡುತ್ತಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸುದೀಪ್, ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಿದ್ದ ‘ಸೈರಾ ನರಸಿಂಹರೆಡ್ಡಿ’ ಚಿತ್ರ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಸುದೀಪ್ ಅವುಕು ರಾಜನ ಪಾತ್ರದಲ್ಲಿ ನಟಿಸಿದ್ದರು. ಈ ಪಾತ್ರಕ್ಕೆ ಫಿದಾ ಆದ ಅಭಿಮಾನಿಗಳು ಅವುಕು ರಾಜು ಫ್ಯಾನ್ ಗರ್ಲ್ ಎಂದು ಟ್ವಿಟ್ಟರ್ ಖಾತೆ ತೆರೆದಿದ್ದರು. ರಷ್ಯಾ ಅಭಿಮಾನಿಯ ಈ ವಿಡಿಯೋವನ್ನು ಅವುಕು ರಾಜು ಫ್ಯಾನ್ ಗರ್ಲ್ಸ್ ಟ್ವಿಟ್ಟರಿನಲ್ಲಿ ಟ್ವೀಟ್ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ಅಭಿಮಾನಿ ಮರೀನಾ ಕಾರ್ಟಿಂಕಾಗೆ ಧನ್ಯವಾದ ತಿಳಿಸಿದ್ದಾರೆ. ಸದ್ಯ ಸುದೀಪ್ ಅವರು ‘ಕೋಟಿಗೊಬ್ಬ-3’ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…
KOLAR NEWS PAPER 27-12-2022
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…