ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ
ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು ನೇಮಿಸಿ, ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ಧಿಗೊಷ್ಠಿ ಜರುಗಿಸಿ, ಮಾತನಾಡಿದರು.
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಏಪ್ರೀಲ್ 13 ರಂದು ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಿಗೆ ಚುನಾವಣೆ ಜರುಗಿಸಲು ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರೀಲ್ 20ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು. ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆಯು ಏಪ್ರೀಲ್ 21 ರಂದು ನಡೆಯಲಿದೆ. ಎಪ್ರಿಲ್ 24 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಮತ್ತು ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಏಣಿಕೆ ಜರುಗಲಿದೆ. ಒಟ್ಟಾರೆ ಮೇ 15 ರಂದು ಎಲ್ಲ ಚುನಾವಣಾ ಪ್ರಕ್ರೀಯೆಗಳು ಮುಕ್ತಾಯವಾಗಲಿವೆ ಎಂದು ಅವರು ಹೇಳಿದರು.
ಮತದಾರರ ಸಂಖ್ಯೆ: ಜಿಲ್ಲೆಯಲ್ಲಿ ಆರು ವಿಧಾನಸಭಾ ಮತಕ್ಷೇತ್ರಗಳಿದ್ದು, ಒಟ್ಟು ಪುರುಷ 625644 ಮಹಿಳಾ 633192 ಹಾಗೂ ಇತರೆ 159 ಸೇರಿದಂತೆ ಒಟ್ಟು 1258995 ಮತದಾರರಿದ್ದಾರೆ.
ಶ್ರೀನಿವಾಸಪುರ ವಿಧಾನಸಭಾ ಮತ ಕ್ಷೇತ್ರ-144 : ಪುರುಷರು-106785 ಮಹಿಳೆಯರು-108213 ಇತರೆ-7. ಒಟ್ಟು ಮತದಾರರು- 215005
ಮುಳಬಾಗಿಲು ವಿಧಾನಸಭಾ ಮತ ಕ್ಷೇತ್ರ-145( ಪ ಜಾ): ಪುರುಷರು – 106430. ಮಹಿಳೆಯರು–107779 ಇತರೆ-10. ಒಟ್ಟು ಮತದಾರರು-214219
ಕೆ ಜಿ ಎಪ್ ವಿಧಾನಸಭಾ ಮತ ಕ್ಷೇತ್ರ-146( ಪ ಜಾ): ಪುರುಷರು-98054. ಮಹಿಳೆಯರು-99148. ಇತರೆ-40. ಒಟ್ಟು ಮತದಾರರು– 197242
ಬಂಗಾರಪೇಟೆ ವಿಧಾನಸಭಾ ಮತ ಕ್ಷೇತ್ರ-147( ಪ ಜಾ): ಪುರುಷರು-101284. ಮಹಿಳೆಯರು-102028. ಇತರೆ-40. ಒಟ್ಟು ಮತದಾರರು-203352
ಕೋಲಾರ ವಿಧಾನಸಭಾ ಮತ ಕ್ಷೇತ್ರ 148: ಪುರುಷರು-118159 ಮಹಿಳೆಯರು-120238. ಇತರೆ – 55. ಒಟ್ಟು ಮತದಾರರು–238452
ಮಾಲೂರು ವಿಧಾನಸಭಾ ಮತ ಕ್ಷೇತ್ರ-149: ಪುರುಷರು-94932. ಮಹಿಳೆಯರು-95786. ಇತರೆ-7. ಒಟ್ಟು ಮತದಾರರು-190725
ಮತಗಟ್ಟೆಗಳ ಸಂಖ್ಯೆ: ಜಿಲ್ಲೆಯಲ್ಲಿ ಒಟ್ಟು 1590 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇವುಗಳ ಪೈಕಿ 392 ಸೂಕ್ಷ್ಮ ಮತಗಟೆಗಳನ್ನು ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮತದಾನದ ದಿನದಂದು ವಿಡಿಯೋಗ್ರಾಫಿ, ವೆಬ್ಕ್ಯಾಸ್ಟಿಂಗ್ ಮತ್ತು ಮೈಕ್ರೋ ಅಬ್ಸರ್ವರ್ಸ್ಗಳನ್ನು ನಿಯಮಾನುಸಾರ ನೇಮಕ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಯುವ ಮತದಾರರು: ಜಿಲ್ಲೆಯಲ್ಲಿ ಪ್ರಸ್ತುತ 2023ರ ವಿಧಾನ ಸಭಾ ಚುನಾವಣೆಗೆ ಒಟ್ಟು 32014 ಯುವ ಮತದಾರರಿದ್ದಾರೆ ಮತ್ತು 80 ವರ್ಷ ಹಾಗೂ ಮೇಲ್ಪಟ್ಟ ಸುಮಾರು 29338 ಹಿರಿಯ ಮತದಾರರಿದ್ದಾರೆ.
ಪ್ರಚಾರ ಸಾಮಗ್ರಿಗಳ ತೆರವು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿವಿಧ ಪಕ್ಷಗಳ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಈಗಾಗಲೇ ಮಾಡಲಾಗುತ್ತಿದೆ. ಇವತ್ತಿನ ವರೆಗೆ ಗೊಡೆ ಬರಹ, ಪೋಸ್ಟರ್ಗಳು, ಬ್ಯಾನರಗಳು ಹಾಗೂ ಇತರೆ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಚುನಾವಣಾ ಆಯೋಗದಿಂದ ತೆರವುಗೊಳಿಸಲಾಗಿದೆ ಮತ್ತು ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿ ಸಾರ್ವಜನಿಕ ಸ್ಥಳ ಅಂದಗೆಡಿಸಿದ್ದ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳ್ಳಿಸಲಾಗಿದೆ.
ಚುನಾವಣಾ ನೀತಿ ಸಂಹಿತೆಯು ಇಂದಿನಿಂದ ಜಾರಿಯಾಗಿದ್ದು, ಅನುಮತಿ ಇಲ್ಲದೆ ಯಾವುದೇ ರೀತಿಯ ಪ್ರಚಾರ ಸಾಮಗ್ರಿಗಳನ್ನು ಅಳವಡಿಸುವಂತಿಲ್ಲ. ನಿಯಮ ಮೀರಿದವರ ವಿರುದ್ಧ ಭಾರತ ಚುನಾವಾಣಾ ಆಯೋಗದ ನಿರ್ದೇಶನದಂತೆ ಮತ್ತು ಜಾರಿಯಲ್ಲಿರುವ ವಿವಿಧ ಕಾನೂನುಗಳಡಿ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಅವರು ಹೇಳಿದರು.
ಆಯುಧಗಳ ಠೇವಣಿಗೆ ಸೂಚನೆ: ಜಿಲ್ಲೆಯಲ್ಲಿ ಪರವಾಣಿಗೆ ಹೊಂದಿರುವ ಆಯುಧಗಳನ್ನು ಸ್ಕ್ರೀನಿಂಗ್ ಕಮಿಟಿ ಪರಿಶೀಲನೆಗೆ ಒಳಪಡಿಸಬೇಕು ಮತ್ತು ಚುನಾವಣಾ ಪ್ರಕ್ರೀಯೆ ಸಂಪೂರ್ಣವಾಗಿ ಮುಗಿಯುವವರೆಗೆ ತಮ್ಮ ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಹಣ, ವಸ್ತು, ಇತರೆ ಸಾಮಗ್ರಿಗಳ ವಶ: ಸೂಕ್ತ ದಾಖಲೆ ಇಲ್ಲದೆ ಹೊಂದಿದ್ದ ಮತ್ತು ಚುನಾವಣಾ ಕಾರಣಕ್ಕೆ ಬಳಕೆಯಾಗುವ ಅನುಮಾನದಿಂದ ಕೆಲವು ಕಡೆ ಹಣ, ವಸ್ತು ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 1ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಣ, ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಆರು ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿ:
ಶ್ರೀನಿವಾಸಪುರ ವಿಧಾನಸಭಾ ಮತಕ್ಷೇತ್ರ-144: ನವಲಗುಂದ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಶ್ರೀನಿವಾಸಪುರ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿ ನಂದಿನಿ(9480870001) ಚುಣಾವಣಾಧಿಕಾರಿಯಾಗಿದ್ದಾರೆ.
ಮುಳಬಾಗಿಲು ವಿಧಾನಸಭಾ ಮತಕ್ಷೇತ್ರ-145: ಮುಳಬಾಗಿಲು ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಮುಳಬಾಗಿಲು ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು ಉಪನಿರ್ದೇಶಕರು ,ಭೂಮಿ ಭಾಗ್ಯಮ್ಮ(9844410602) ಚುಣಾವಣಾಧಿಕಾರಿಯಾಗಿದ್ದಾರೆ.
ಕೆಜಿಎಫ್ ವಿಧಾನಸಭಾ ಮತಕ್ಷೇತ್ರ-145: ಕೆಜಿಎಫ್ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಕೆಜಿಎಫ್ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿನಿರ್ದೇಶಕರಾದ ಮೊಹಮ್ಮದ್ ಅಫೀಕ್ ಉಲ್ಲಾ ಷರೀಫ್ (9845628883) ಚುಣಾವಣಾಧಿಕಾರಿಯಾಗಿದ್ದಾರೆ.
ಬಂಗಾರಪೇಟೆ ವಿಧಾನಸಭಾ ಮತಕ್ಷೇತ್ರ-147: ಬಂಗಾರಪೇಟೆ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಬಂಗಾರಪೇಟೆ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಶೃತಿ ಎಂ ಕೆ(9591056238)ಚುಣಾವಣಾಧಿಕಾರಿಯಾಗಿದ್ದಾರೆ.
ಕೋಲಾರ ವಿಧಾನಸಭಾ ಮತಕ್ಷೇತ್ರ-148: ಕೋಲಾರ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಕೋಲಾರ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಕೋಲಾರ ಸಹಾಯಕ ಆಯುಕ್ತರಾದ ಹೆಚ್ ಎಸ್ ವೆಂಕಟಲಕ್ಷ್ಮೀ (8105595859) ಚುಣಾವಣಾಧಿಕಾರಿಯಾಗಿದ್ದಾರೆ.
ಮಾಲೂರು ವಿಧಾನಸಭಾ ಮತಕ್ಷೇತ್ರ-149: ಮಾಲೂರು ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಮಾಲೂರು ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ತೋಟಗಾರಿಕೆ ಉಪನಿರ್ದೇಶಕರಾದ ಕುಮಾರಸ್ವಾಮಿ(9900590596) ಚುಣಾವಣಾಧಿಕಾರಿಯಾಗಿದ್ದಾರೆ.
ಚುನಾವಣಾಧಿಕಾರಿಗಳು ವಿಧಾನ ಸಭಾ ಮತಕ್ಷೆತ್ರ ವ್ಯಾಪ್ತಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ವಾಹನ ಪರವಾಣಿಗೆ ಮುಂತಾದವುಗಳ ಅರ್ಜಿಗಳನ್ನು ಸು-ವಿಧಾ ತಂತ್ರಾಂಶದ ಮೂಲಕ ಸಲ್ಲಿಸಿದ್ದಲ್ಲಿ ಪರವಾನಿಗೆ ನೀಡುವ ಕುರಿತು ಕ್ರಮವಹಿಸಬೇಕು. ಮತ್ತು ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿದಂತೆ ಈ ಕುರಿತು ಅರ್ಜಿಗಳಿದ್ದಲ್ಲಿ ಜಿಲ್ಲಾ ಚುನಾವಣಾ ಕಾರ್ಯಾಲಯದಿಂದ ಕ್ರಮವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಾದರಿ ನೀತಿ ಸಂಹಿತೆ ಕುರಿತು ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು:
ಮಾಧ್ಯಮ ಉಸ್ತುವಾರಿ ಕೇಂದ್ರಕ್ಕೆ ಮೇಲ್ವಿಚಾರಣೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಮತ್ತು ದೂರು ನಿರ್ವಹಣಾ ತಂಡ(1950)ವನ್ನು ನೇಮಿಸಲಾಗಿದೆ. ಈ ಎರಡು ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತವೆ. ಸಾರ್ವಜನಿಕರು ಅಥವಾ ಯಾರೇ ಆಗಲಿ ಚುನಾವಣಾ ಸಂಬಂಧಿತ ದೂರುಗಳಿದ್ದಲ್ಲಿ ಸು-ವಿಧಾ ತಂತ್ರಾಂಶ ಅಥವಾ 1950 ಸಹಾಯವಾಣಿ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಎಂ.ನಾರಾಯಣ ಅಪರ ಜಿಲ್ಲಾಧಿಕಾರಿ ಡಾ.ಸಂಕರಗೌಡ ವಣಿಕ್ಯಾಳ್ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯ ತಹಶೀಲ್ದಾರ ನಾಗವೇಣಿ, ಶಿರಸ್ತೆದಾರ ಮಂಜುಳಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…