ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ
ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು ನೇಮಿಸಿ, ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ಧಿಗೊಷ್ಠಿ ಜರುಗಿಸಿ, ಮಾತನಾಡಿದರು.
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಏಪ್ರೀಲ್ 13 ರಂದು ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಿಗೆ ಚುನಾವಣೆ ಜರುಗಿಸಲು ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರೀಲ್ 20ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು. ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆಯು ಏಪ್ರೀಲ್ 21 ರಂದು ನಡೆಯಲಿದೆ. ಎಪ್ರಿಲ್ 24 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಮತ್ತು ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಏಣಿಕೆ ಜರುಗಲಿದೆ. ಒಟ್ಟಾರೆ ಮೇ 15 ರಂದು ಎಲ್ಲ ಚುನಾವಣಾ ಪ್ರಕ್ರೀಯೆಗಳು ಮುಕ್ತಾಯವಾಗಲಿವೆ ಎಂದು ಅವರು ಹೇಳಿದರು.
ಮತದಾರರ ಸಂಖ್ಯೆ: ಜಿಲ್ಲೆಯಲ್ಲಿ ಆರು ವಿಧಾನಸಭಾ ಮತಕ್ಷೇತ್ರಗಳಿದ್ದು, ಒಟ್ಟು ಪುರುಷ 625644 ಮಹಿಳಾ 633192 ಹಾಗೂ ಇತರೆ 159 ಸೇರಿದಂತೆ ಒಟ್ಟು 1258995 ಮತದಾರರಿದ್ದಾರೆ.
ಶ್ರೀನಿವಾಸಪುರ ವಿಧಾನಸಭಾ ಮತ ಕ್ಷೇತ್ರ-144 : ಪುರುಷರು-106785 ಮಹಿಳೆಯರು-108213 ಇತರೆ-7. ಒಟ್ಟು ಮತದಾರರು- 215005
ಮುಳಬಾಗಿಲು ವಿಧಾನಸಭಾ ಮತ ಕ್ಷೇತ್ರ-145( ಪ ಜಾ): ಪುರುಷರು – 106430. ಮಹಿಳೆಯರು–107779 ಇತರೆ-10. ಒಟ್ಟು ಮತದಾರರು-214219
ಕೆ ಜಿ ಎಪ್ ವಿಧಾನಸಭಾ ಮತ ಕ್ಷೇತ್ರ-146( ಪ ಜಾ): ಪುರುಷರು-98054. ಮಹಿಳೆಯರು-99148. ಇತರೆ-40. ಒಟ್ಟು ಮತದಾರರು– 197242
ಬಂಗಾರಪೇಟೆ ವಿಧಾನಸಭಾ ಮತ ಕ್ಷೇತ್ರ-147( ಪ ಜಾ): ಪುರುಷರು-101284. ಮಹಿಳೆಯರು-102028. ಇತರೆ-40. ಒಟ್ಟು ಮತದಾರರು-203352
ಕೋಲಾರ ವಿಧಾನಸಭಾ ಮತ ಕ್ಷೇತ್ರ 148: ಪುರುಷರು-118159 ಮಹಿಳೆಯರು-120238. ಇತರೆ – 55. ಒಟ್ಟು ಮತದಾರರು–238452
ಮಾಲೂರು ವಿಧಾನಸಭಾ ಮತ ಕ್ಷೇತ್ರ-149: ಪುರುಷರು-94932. ಮಹಿಳೆಯರು-95786. ಇತರೆ-7. ಒಟ್ಟು ಮತದಾರರು-190725
ಮತಗಟ್ಟೆಗಳ ಸಂಖ್ಯೆ: ಜಿಲ್ಲೆಯಲ್ಲಿ ಒಟ್ಟು 1590 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇವುಗಳ ಪೈಕಿ 392 ಸೂಕ್ಷ್ಮ ಮತಗಟೆಗಳನ್ನು ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮತದಾನದ ದಿನದಂದು ವಿಡಿಯೋಗ್ರಾಫಿ, ವೆಬ್ಕ್ಯಾಸ್ಟಿಂಗ್ ಮತ್ತು ಮೈಕ್ರೋ ಅಬ್ಸರ್ವರ್ಸ್ಗಳನ್ನು ನಿಯಮಾನುಸಾರ ನೇಮಕ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಯುವ ಮತದಾರರು: ಜಿಲ್ಲೆಯಲ್ಲಿ ಪ್ರಸ್ತುತ 2023ರ ವಿಧಾನ ಸಭಾ ಚುನಾವಣೆಗೆ ಒಟ್ಟು 32014 ಯುವ ಮತದಾರರಿದ್ದಾರೆ ಮತ್ತು 80 ವರ್ಷ ಹಾಗೂ ಮೇಲ್ಪಟ್ಟ ಸುಮಾರು 29338 ಹಿರಿಯ ಮತದಾರರಿದ್ದಾರೆ.
ಪ್ರಚಾರ ಸಾಮಗ್ರಿಗಳ ತೆರವು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿವಿಧ ಪಕ್ಷಗಳ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಈಗಾಗಲೇ ಮಾಡಲಾಗುತ್ತಿದೆ. ಇವತ್ತಿನ ವರೆಗೆ ಗೊಡೆ ಬರಹ, ಪೋಸ್ಟರ್ಗಳು, ಬ್ಯಾನರಗಳು ಹಾಗೂ ಇತರೆ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಚುನಾವಣಾ ಆಯೋಗದಿಂದ ತೆರವುಗೊಳಿಸಲಾಗಿದೆ ಮತ್ತು ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿ ಸಾರ್ವಜನಿಕ ಸ್ಥಳ ಅಂದಗೆಡಿಸಿದ್ದ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳ್ಳಿಸಲಾಗಿದೆ.
ಚುನಾವಣಾ ನೀತಿ ಸಂಹಿತೆಯು ಇಂದಿನಿಂದ ಜಾರಿಯಾಗಿದ್ದು, ಅನುಮತಿ ಇಲ್ಲದೆ ಯಾವುದೇ ರೀತಿಯ ಪ್ರಚಾರ ಸಾಮಗ್ರಿಗಳನ್ನು ಅಳವಡಿಸುವಂತಿಲ್ಲ. ನಿಯಮ ಮೀರಿದವರ ವಿರುದ್ಧ ಭಾರತ ಚುನಾವಾಣಾ ಆಯೋಗದ ನಿರ್ದೇಶನದಂತೆ ಮತ್ತು ಜಾರಿಯಲ್ಲಿರುವ ವಿವಿಧ ಕಾನೂನುಗಳಡಿ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಅವರು ಹೇಳಿದರು.
ಆಯುಧಗಳ ಠೇವಣಿಗೆ ಸೂಚನೆ: ಜಿಲ್ಲೆಯಲ್ಲಿ ಪರವಾಣಿಗೆ ಹೊಂದಿರುವ ಆಯುಧಗಳನ್ನು ಸ್ಕ್ರೀನಿಂಗ್ ಕಮಿಟಿ ಪರಿಶೀಲನೆಗೆ ಒಳಪಡಿಸಬೇಕು ಮತ್ತು ಚುನಾವಣಾ ಪ್ರಕ್ರೀಯೆ ಸಂಪೂರ್ಣವಾಗಿ ಮುಗಿಯುವವರೆಗೆ ತಮ್ಮ ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಹಣ, ವಸ್ತು, ಇತರೆ ಸಾಮಗ್ರಿಗಳ ವಶ: ಸೂಕ್ತ ದಾಖಲೆ ಇಲ್ಲದೆ ಹೊಂದಿದ್ದ ಮತ್ತು ಚುನಾವಣಾ ಕಾರಣಕ್ಕೆ ಬಳಕೆಯಾಗುವ ಅನುಮಾನದಿಂದ ಕೆಲವು ಕಡೆ ಹಣ, ವಸ್ತು ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 1ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಣ, ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಆರು ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿ:
ಶ್ರೀನಿವಾಸಪುರ ವಿಧಾನಸಭಾ ಮತಕ್ಷೇತ್ರ-144: ನವಲಗುಂದ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಶ್ರೀನಿವಾಸಪುರ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿ ನಂದಿನಿ(9480870001) ಚುಣಾವಣಾಧಿಕಾರಿಯಾಗಿದ್ದಾರೆ.
ಮುಳಬಾಗಿಲು ವಿಧಾನಸಭಾ ಮತಕ್ಷೇತ್ರ-145: ಮುಳಬಾಗಿಲು ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಮುಳಬಾಗಿಲು ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು ಉಪನಿರ್ದೇಶಕರು ,ಭೂಮಿ ಭಾಗ್ಯಮ್ಮ(9844410602) ಚುಣಾವಣಾಧಿಕಾರಿಯಾಗಿದ್ದಾರೆ.
ಕೆಜಿಎಫ್ ವಿಧಾನಸಭಾ ಮತಕ್ಷೇತ್ರ-145: ಕೆಜಿಎಫ್ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಕೆಜಿಎಫ್ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿನಿರ್ದೇಶಕರಾದ ಮೊಹಮ್ಮದ್ ಅಫೀಕ್ ಉಲ್ಲಾ ಷರೀಫ್ (9845628883) ಚುಣಾವಣಾಧಿಕಾರಿಯಾಗಿದ್ದಾರೆ.
ಬಂಗಾರಪೇಟೆ ವಿಧಾನಸಭಾ ಮತಕ್ಷೇತ್ರ-147: ಬಂಗಾರಪೇಟೆ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಬಂಗಾರಪೇಟೆ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಶೃತಿ ಎಂ ಕೆ(9591056238)ಚುಣಾವಣಾಧಿಕಾರಿಯಾಗಿದ್ದಾರೆ.
ಕೋಲಾರ ವಿಧಾನಸಭಾ ಮತಕ್ಷೇತ್ರ-148: ಕೋಲಾರ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಕೋಲಾರ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಕೋಲಾರ ಸಹಾಯಕ ಆಯುಕ್ತರಾದ ಹೆಚ್ ಎಸ್ ವೆಂಕಟಲಕ್ಷ್ಮೀ (8105595859) ಚುಣಾವಣಾಧಿಕಾರಿಯಾಗಿದ್ದಾರೆ.
ಮಾಲೂರು ವಿಧಾನಸಭಾ ಮತಕ್ಷೇತ್ರ-149: ಮಾಲೂರು ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಮಾಲೂರು ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ತೋಟಗಾರಿಕೆ ಉಪನಿರ್ದೇಶಕರಾದ ಕುಮಾರಸ್ವಾಮಿ(9900590596) ಚುಣಾವಣಾಧಿಕಾರಿಯಾಗಿದ್ದಾರೆ.
ಚುನಾವಣಾಧಿಕಾರಿಗಳು ವಿಧಾನ ಸಭಾ ಮತಕ್ಷೆತ್ರ ವ್ಯಾಪ್ತಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ವಾಹನ ಪರವಾಣಿಗೆ ಮುಂತಾದವುಗಳ ಅರ್ಜಿಗಳನ್ನು ಸು-ವಿಧಾ ತಂತ್ರಾಂಶದ ಮೂಲಕ ಸಲ್ಲಿಸಿದ್ದಲ್ಲಿ ಪರವಾನಿಗೆ ನೀಡುವ ಕುರಿತು ಕ್ರಮವಹಿಸಬೇಕು. ಮತ್ತು ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿದಂತೆ ಈ ಕುರಿತು ಅರ್ಜಿಗಳಿದ್ದಲ್ಲಿ ಜಿಲ್ಲಾ ಚುನಾವಣಾ ಕಾರ್ಯಾಲಯದಿಂದ ಕ್ರಮವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಾದರಿ ನೀತಿ ಸಂಹಿತೆ ಕುರಿತು ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು:
ಮಾಧ್ಯಮ ಉಸ್ತುವಾರಿ ಕೇಂದ್ರಕ್ಕೆ ಮೇಲ್ವಿಚಾರಣೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಮತ್ತು ದೂರು ನಿರ್ವಹಣಾ ತಂಡ(1950)ವನ್ನು ನೇಮಿಸಲಾಗಿದೆ. ಈ ಎರಡು ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತವೆ. ಸಾರ್ವಜನಿಕರು ಅಥವಾ ಯಾರೇ ಆಗಲಿ ಚುನಾವಣಾ ಸಂಬಂಧಿತ ದೂರುಗಳಿದ್ದಲ್ಲಿ ಸು-ವಿಧಾ ತಂತ್ರಾಂಶ ಅಥವಾ 1950 ಸಹಾಯವಾಣಿ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಎಂ.ನಾರಾಯಣ ಅಪರ ಜಿಲ್ಲಾಧಿಕಾರಿ ಡಾ.ಸಂಕರಗೌಡ ವಣಿಕ್ಯಾಳ್ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯ ತಹಶೀಲ್ದಾರ ನಾಗವೇಣಿ, ಶಿರಸ್ತೆದಾರ ಮಂಜುಳಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.