ಸುದ್ದಿ

ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

18

ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು. ಅಷ್ಟೇ ಅಲ್ಲ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದರು.

ನಂತರ ಸಿಎಂ ತಮ್ಮ ಸಿಟ್ಟನ್ನು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೇಲೆ ಹೊರ ಹಾಕಿದರು. ಗರಂ ಆಗಿದ್ದ ಸಿಎಂ ಅವರನ್ನು ನಾಡಗೌಡ ಅವರು ಸಮಾಧಾನಪಡಿಸಿ, ಯಾವನ್ರೀ ಅವನು ಎಸ್ಪಿ ಎಂದು ಪೊಲೀಸ್ ಅಧಿಕಾರಿಗಳ ಮೇಲೆ ತಮ್ಮ ಕೋಪವನ್ನು ಹೊರಹಾಕಿದರು.

ನಂತರ ಬಸ್‍ನಲ್ಲೇ ಕುಳಿತು ಮನವಿ ಸ್ವೀಕಾರ ಮಾಡಿದ ಮುಖ್ಯಮಂತ್ರಿಗಳು, ಮಾನ್ವಿ ತಾಲೂಕಿನ ಕಲ್ಲೂರಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಮತ್ತು ಪದವಿ ಕಾಲೇಜು ತೆರಯುವ ಭರವಸೆ ನೀಡಿದರು. ಇದೇ ವೇಳೆ ಕಿವಿ ಕೇಳದ ಗ್ರಾಮದ ಮಗುವೊಂದರ ಚಿಕಿತ್ಸೆಗೆ ಹಣ ನೀಡುವ ಭರವಸೆ ನೀಡಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚನೆ ನೀಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…