ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.
ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ ಜತೆಯಲ್ಲಿದ್ದಾರೆ. ನನ್ನ ಎಲ್ಲ ತಪ್ಪುಗಳನ್ನು ಅವಳು ಕ್ಷಮಿಸಿದ್ದಾಳೆ ಎಂದು ಪತ್ನಿಯನ್ನು ಹೊಗಳಿದರು.
ಇಂದಿನ ಕಲಾಪ ಇತಿಹಾಸದಲ್ಲಿ ದಾಖಲಾಗುವಂತಹದ್ದಾಗಿದೆ. ನಾನು ಸಂತೋಷವಾಗಿ ಮುಖ್ಯಮಂತ್ರಿ ಹುದ್ದೆ ತೊರೆಯುಯಲು ನಾನು ಸಿದ್ಧವಾಗಿದ್ದೇನೆ ಎಂದರು.
ಸಾಮಾಜಿಕ ತಾಣಗಳ ಮೇಲೆ ಕೆಂಡಾಮಂಡಲ
ಸಮಾಜಿಕ ತಾಣಗಳೇ ಇಂದು ಎಲ್ಲವನ್ನೂ ಹಾಳು ಮಾಡುತ್ತಿದೆ. ಯುವಕರು ಕುಲಗೆಡುತ್ತಿದ್ದಾರೆ. ದೇಶದ ಸಂಸ್ಕೃತಿಯನ್ನು ಹಾಳಳು ಮಾಡಲು ಸೋಷಿಯಲ್ ಮೀಡಿಯಾಗಳು ಹೊರಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಂಗಳವಾರ ಕಲಾಪ ಆರಂಭವಾದರೂ ನಾನು ಹೋಟೆಲ್ ನಲ್ಲಿ ಕುಳಿತು ಆರಾಮವಾಗಿ ಕುಳಿತಿದ್ದೇನೆ ಎಂದು ಹೇಳಲಾಗುತ್ತಿತ್ತು. ಅಲ್ಲಿ ನಾನು ಸುಮ್ಮನೆ ಕುಳಿತಿಲ್ಲ. ನಾನು ಸಿದ್ಧತೆ ನಡೆಸುತ್ತಿದ್ದೆ. ಜನರ ತೆರಿಗೆ ಹಣವನ್ನು ಹೋಟೆಲ್ನಲ್ಲಿ ಕುಳಿತು ಪೋಲು ಮಾಡಲಾಗುತ್ತಿದೆ ಎಂದೆಲ್ಲ ಹೇಳಲಾಗಿದೆ. ಈ ಎಲ್ಲ ವಿಚಾರಗಳು ಸಾಕಷ್ಟು ಬೇಸರ ಉಂಟು ಮಾಡಿದೆ.
ರಾಜ್ಯ ರಾಜಕಾರಣ ಟ್ರೋಲಿಗರಿಗೆ ಬಾಡೂಟ…. ಏನೆಲ್ಲ ಮಾಡಿದಾರೆ ನೋಡಿ!
ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿಂದಲೂ ಅಪಪ್ರಾಚಾರ ಮಾಡಲಾಗುತ್ತುದೆ. ಸೋಷಿಯಲ್ ಮೀಡಿಯಾದಲ್ಲಿ ಮನಬಂದಂತೆ ಪೋಸ್ಟ್ ಹಾಕಲಾಗಿದೆ. ರೈತರ ವಿಚಾರದಲ್ಲಿ ಸುಳ್ಳು ಹೇಳಲು ನಾನು ಹೋಗುವುದಿಲ್ಲ. ಈ ಹಿಂದಿನ ಬಿಜೆಪಿ ಜತೆಗಿನ ಮೈತ್ರಿ ಸರಕಾರದ ಪತನದ ಬಳಿಕ ನನ್ನನ್ನು ವಚನ ಭ್ರಷ್ಟ ಎನ್ನಲಾಗುತ್ತಿದೆ. ವಿಶ್ವಾಸಮತ ಯಾಚಿಸದೇ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದರು. ನಾನು ಅಧಿಕಾರ ಅವರಿಗೆ ಹಸ್ತಾಂತರಿಸಿದ್ದೆ. ನನ್ನಿಂದ ಯಾವುದೇ ತಪ್ಪಾಗಿಲ್ಲ. ಪದೇ ಪದೇ ನನ್ನನ್ನು ವಚನ ಭ್ರಷ್ಟ ಅನ್ನಬೇಡಿ. ಈ ಬಗ್ಗೆ ನಿಮ್ಮ ಕಾರ್ಯಕರ್ತರಿಗೆ ತಿಳಿಸಿ ಹೇಳುವಂತೆ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?