ಸುದ್ದಿ

ರಾಮ..ರಾಮ..ಮತ್ತೆ ಭಗವಾನ್ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಭಕ್ತರ ಕೆಂಗಣ್ಣಿಗೆ ಗುರಿಯಾದ ಪ್ರೊಫೆಸರ್ ಭಗವಾನ್..!

180

ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ.

ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪ್ರೊಫೆಸರ್ ಭಗವಾನ್‍ರವರು ರಾಮ ಮಂದಿರ ಏಕೆ ಬೇಡ? ಎಂಬ ವಿವಾದಾತ್ಮಕ ಪುಸ್ತಕವನ್ನು ಬರೆದಿದ್ದಾರೆ. ಅದರಲ್ಲಿ ರಾಮನ ಬಗ್ಗೆ ವಿವಾದಾತ್ಮಕವಾಗಿ ಬರೆದುಕೊಂಡಿದ್ದಾರೆ. ರಾಮ, ಮಹಾತ್ಮ ಗಾಂಧೀಜಿ ಹಾಗೂ ಚಾಮುಂಡಿ ದೇವಿಯನ್ನು ಟೀಕಿಸಿದ್ದಾರೆ.

ಭಗವಾನ್‍ ರವರು ಬರೆದಿರುವ ಪುಸ್ತಕದಲ್ಲಿ ಏನೆಲ್ಲಾ ವಿವಾದಾತ್ಮಕ ಅಂಶಗಳಿವೆ ಗೊತ್ತಾ..?

ರಾಮ ಹಾಗೂ ಸೀತೆ ಮಾಂಸವನ್ನು ಸೇವಿಸುತ್ತಿದ್ದರು. ಮದ್ಯಪಾನವನ್ನು ಮಾಡುತ್ತಿದ್ದರು. ರಾಮ ತನ್ನ ಕೈಯಿಂದ ಸೀತೆಗೆ ಮದ್ಯಪಾನ ಮಾಡಿಸುತ್ತಿದ್ದ. ರಾಮ ಏಕಪತ್ನಿವ್ರತಸ್ಥ ಎನ್ನುವುದು ಕಟ್ಟುಕತೆ. ರಾಮ ಹುಡುಗಿಯರ ಹಾಗೂ ವನಿತೆಯರ ಜೊತೆ ಕುಡಿದು ನೃತ್ಯ ಮಾಡಿ, ಅವರನ್ನು ಸಂತೋಷ ಪಡಿಸುತ್ತಿದ್ದ. ರಾಮ ದೇವರೇ ಅಲ್ಲ, ಅವನೊಬ್ಬ ಕೊಲೆಗಡುಕ. ದಾಳಿಕೋರರಿಂದ ತಪ್ಪಿಸಿಕೊಳ್ಳಲಾಗದವರು, ದೇವರುಗಳೇ ಅಲ್ಲವೆಂದು ಉಲ್ಲೇಖಿಸಿದ್ದಾರೆ.

ಇದಲ್ಲದೇ ಕೃಷ್ಣ, ಶಿವ, ಚಾಮುಂಡಿ ಹಾಗೂ ಮಾರಮ್ಮರನ್ನು ಕಸದಂತೆ ತಿರಸ್ಕರಿಸಿ ಎಸೆಯಿರಿ. ಮಹಾತ್ಮ ಗಾಂಧೀಜಿಯೂ ಒಬ್ಬ ಮತಾಂಧ ಹಾಗೂ ಮೂಲಭೂತವಾದಿಯಾಗಿದ್ದಾನೆ. ಗಾಂಧೀಜಿ, ರಾಮ, ಗೀತೆ, ಚಾತುರ್ವರ್ಣ ಪ್ರತಿಪಾದಿಸಿದ್ದು, ಶೂದ್ರರಿಗೆ ಮಾಡಿದ ಮಹಾ ದ್ರೋಹ ಎಂದು ಬರೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ