ಸುದ್ದಿ

ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

83

ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…