ಸುದ್ದಿ

ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

59

ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು ಲೀಡ್ ಕಾಮಿಡಿ ನಟರು ಡಿಫರೆಂಟಾಗಿರೋ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ ಮಾರಾಟಕ್ಕಿಟ್ಟಿರೋ ಮನೆಯೊಳಗಿನ ವಿಚಿತ್ರ ಬೂತಬಾಧೆಯಿಂದ ತಾವು ಕಂಗಾಲಾಗಿ ಪ್ರೇಕ್ಷಕರಲ್ಲಿ ನಗೆಯುಕ್ಕಿಸಲು ರೆಡಿಯಾಗಿದ್ದಾರೆ.

ಸಾಧು ಕೋಕಿಲಾ ಮತ್ತು ಚಿಕ್ಕಣ್ಣರಂಥಾ ನಟರನ್ನು ಈವರೆಗೂ ಕನ್ನಡದ ಪ್ರೇಕ್ಷಕರು ನಾನಾ ಪಾತ್ರಗಳಲ್ಲಿ ನೋಡಿದ್ದಾರೆ. ಆದರೆ ಇದೇ ವಾರ ಬಿಡುಗಡೆಯಾಗಲಿರುವ ಮನೆ ಮಾರಾಟಕ್ಕಿದೆ ಎಂಬ ಚಿತ್ರದಂಥಾ ಪಾತ್ರಗಳಲ್ಲಿ ಈ ಹಿಂದೆಂದೂ ನೋಡಿರಲು ಸಾಧ್ಯವೇ ಇಲ್ಲ ಅನ್ನೋದು ಚಿತ್ರತಂಡದ ವಿಶ್ವಾಸ. ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಟ್ರೇಲರ್‍ನಲ್ಲಿ ಇವರೆಲ್ಲರ ಪಾತ್ರಗಳ ಝಲಕ್‍ಗಳೂ ಸ್ಪಷ್ಟವಾಗಿಯೇ ಕಾಣಿಸಿವೆ. ಆದರೆ ಅದನ್ನೂ ಮೀರಿದ ಮಜಾ ಈ ಪಾತ್ರಗಳಿಂದ ಪ್ರೇಕ್ಷಕರಿಗೆ ಸಿಗಲಿದೆಯಂತೆ.

ಸಾಧು ಕೋಕಿಲಾ ಕನ್ನಡ ಚಿತ್ರರಂಗದ ಹೆಮ್ಮೆಯ ಪ್ರತಿಭಾವಂತ ಹಾಸ್ಯ ಕಲಾವಿದ. ಅವರೊಂದು ಸಿನಿಮಾದಲ್ಲಿ ನಟಿಸಿದ್ದಾರೆಂದರೆ, ಅದು ವಿಶೇಷವಾಗಿರುತ್ತದೆಂದೇ ಅರ್ಥ. ಅವರ ಪಾತ್ರದ ಮೇಲೆ ಅಗಾಧ ಪ್ರಮಾಣದಲ್ಲಿ ನಿರೀಕ್ಷೆಉಗಳೂ ಇರೋದು ಸುಳ್ಳಲ್ಲ. ಆದರೆ ಮನೆ ಮಾರಾಟಕ್ಕಿದೆ ಚಿತ್ರದಲ್ಲಿ ಮಾತ್ರ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಸಾಧು ಮಹಾರಾಜರ ಪಾತ್ರ ಮೂಡಿ ಬಂದಿದೆಯಂತೆ. ಇಲ್ಲಿ ನಾಲಕ್ಕು ಹಾಸ್ಯ ಕಲಾವಿದರ ಪಾತ್ರವೂ ಕೂಡಾ ಒಂದಕ್ಕಿಂತ ಒಂದು ಚೆಂದ ಎಂಬಂತೆ ಮೂಡಿ ಬಂದಿದೆ ಎಂಬ ಭರವಸೆ ನಿರ್ದೇಶಕರಲ್ಲಿದೆ. ಅದೇನೆಂಬುದು ಇನ್ನು ದಿನದೊಪ್ಪತ್ತಿನಲ್ಲಿಯೇ ಜಾಹೀರಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ