ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.
ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ.
ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.
ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.
ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್ಸಿ, ಎಸ್ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.
ಬೆಂಗಳೂರಿನ ಅಪಾರ್ಟ್ಮೆಂಟ್ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.
ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.
ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್ಗಳನ್ನು ಎಲೆಕ್ಟ್ರಿಕ್ ಬಸ್ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್ಗಳನ್ನು ಸ್ಥಾಪಿಸುತ್ತೇವೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್ಂದ್ರ ಪ್ರಧಾನ್ ಇತರರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…