ರಾಜಕೀಯ

ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

100

ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.

ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.

ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.

ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.

ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.

ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.

ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.

ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.

ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್‍ಂದ್ರ ಪ್ರಧಾನ್ ಇತರರಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…