News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”
ಸುದ್ದಿ

ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

128

ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.

ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.

ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್‌ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.

ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • ರಾಜಕೀಯ

    ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮಿ ಯಾರಿಗೆ..?ಈ ವರದಿಯಲ್ಲಿ ಏನಿದೆ ಗೊತ್ತಾ..?

    ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…